Darshan's X-ray Report ದರ್ಶನ್ ಅವರ ಬಲಗೈಯಲ್ಲಿ ಮೂಳೆ ಮುರಿದಿದೆ
ಕಾರ್ ಅಪಘಾತದಿಂದಾಗಿ ಗಾಯಗೊಂಡಿರುವ ದರ್ಶನ್ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದೀಗ ವೈದ್ಯರು ದರ್ಶನ್ ಮತ್ತು ದೇವರಾಜ್ ಅವರ ಎಕ್ಸ್ ರೇ ರಿಪೋರ್ಟ್ ಬಿಡುಗಡೆ ಮಾಡಿದ್ದಾರೆ. ಕಾರ್ ಅಪಘಾತ ಸಂಭವಿಸಿದಾಗ ದರ್ಶನ್ ಅವರು ತಮ್ಮ ಬಲಗೈಯನ್ನು ಕಾರಿನ ಮುಂಭಾಗಕ್ಕೆ ಕೊಟ್ಟಿದ್ದಾರೆ. ಆಗ ಕೈಯಲ್ಲಿ ಹಾಕಿದ್ದ ಕಡಗ ಚುಚ್ಚಿ ಮೂಳೆ ಮುರಿದಿತ್ತು. ನಂತರ ಅವರನ್ನು ಮೈಸೂರಿನ ಹೊರವಲಯದಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.